ಗುರುವಾರ, ಏಪ್ರಿಲ್ 24, 2014

ಯಾವ ಮೋಹನ ಮುರಲಿ ಕರೆಯಿತು


ಯಾವ ಮೋಹನ ಮುರಲಿ ಕರೆಯಿತು ದೂರ ತೀರಕೆ ನಿನ್ನನು ?
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ?
ಸಪ್ತ ಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ ,
ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ ?
ವಿವಶವಾಯಿತು ಪ್ರಾಣ ; ಹಾ ! ಪರವಶವು ನಿನ್ನೀ ಚೇತನ ;
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ ?

~~~ ಗೋಪಾಲಕೃಷ್ಣ ಅಡಿಗ

ಬುಧವಾರ, ಏಪ್ರಿಲ್ 23, 2014

ತಾಳ್ಮೆ


ನೆಟ್ಟ ಸಸಿ ಫಲ ಬರುವ ತನಕ ಶಾಂತಿಯ ತಾಳು,
ಕಟ್ಟು ಬುತ್ತಿಯ ಮುಂದೆ ಉಣಲುಂಟು ತಾಳು,
ಕಷ್ಟ ಬಂದರೆ ತಾಳು ಕಂಗೆಡದೆ ತಾಳು,
ದುಷ್ಟ ಮನುಜರು ಪೇಳ್ವ ನಿಷ್ಟುರದ ನುಡಿ ತಾಳು,
ಉಕ್ಕು ಹಾಲಿಗೆ ನೀರನಿಕ್ಕುವಂದದಿ ತಾಳು.
~ ~~ ಶ್ರೀ ವಾದಿರಾಜ ಯತಿವರ್ಯರು